Posts

Image
  ರಾಯಚೂರು ಜಿಲ್ಲೆಯಲ್ಲಿ ಒಟ್ಟು 13,93,163 ಮತದಾರರ ಕರಡು ಪಟ್ಟಿ ಪ್ರಕಟ- ಜಿಲ್ಲಾಧಿಕಾರಿ ಪೂವಿತಾ ಎಸ್. ಜಯ ಧ್ವಜ ನ್ಯೂಸ್ ,ರಾಯಚೂರು, ಅ. ‌24 -  ಜಿಲ್ಲೆಯ ಎಲ್ಲಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ 2026ನೇ ಸಾಲಿನ ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 13,93,163 ಮತದಾರರು ಕರಡು ಪಟ್ಟಿಯಲ್ಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಹೇಳಿದರು. ಅವರಿಂದು ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಯಚೂರು ಜಿಲ್ಲೆಯಲ್ಲಿ ಒಟ್ಟು 13,93,163 (ಪುರುಷ, ಮಹಿಳೆ ಮತ್ತು ಇತರೆ ಮತದಾರರು ಒಳಗೊಂಡಂತೆ) ಮತದಾರರು ಇದ್ದಾರೆ. ಹಿಂದಿನ ಮತದಾರರ ಪಟ್ಟಿಯಿಂದ ಒಟ್ಟು 3,21,396 ಮತದಾರರನ್ನು ತೆಗೆದುಹಾಕಲಾಗಿದೆ. ಅದರಲ್ಲಿ ಮರಣ ಹೊಂದಿದವರು 61,385, ಫರ್ಮನೆಂಟ್  ಆಗಿ ಶಿಫ್ಟ್ ಆದವರು 1,87,941, ಆಬ್ಸೆಂಟಿ ಮತದಾರರು 30,733 ಹಾಗೂ ಇತರರು: 365 ಒಳಗೊಂಡಿದೆ ಎಂದರು. 2025ರ ಮತದಾರರ ಪಟ್ಟಿಗೆ ಹೋಲಿಸಿದರೆ ಈ ಬಾರಿಯ ಕರಡು ಪಟ್ಟಿಯಲ್ಲಿ 3,21,396 (ಶೇಕಡಾ 18.75%) ಮತದಾರರ ವ್ಯತ್ಯಾಸವಿದೆ. ಯುವ ಮತದಾರರು (18-19 ವಯಸ್ಸು): 11,56,627 ಜನರು ಕರಡು ಪಟ್ಟಿಯಲ್ಲಿದ್ದಾರೆ. ಅಲ್ಲದೆ ‌17,048 ಮತದಾರರು ವಿವಿಧ ರೀತಿಯಲ್ಲಿ ...
Image
  ದಲಿತರ ವಿಮೋಚನೆಗೆ ಶಿಕ್ಷಣವೇ ಅಸ್ತ್ರ- ವೆಂಕಟೇಶ ಬೇವಿನಬೆಂಚಿ ಜಯ ಧ್ವಜ ನ್ಯೂಸ್ ,ರಾಯಚೂರು, ಆ.23-  ದೇಶದಲ್ಲಿ ಸಾವಿರಾರು ವರ್ಷಗಳ ಕಾಲ ದಲಿತರು ಜಾತಿ ದೌರ್ಜನ್ಯ, ಅತ್ಯಾಚಾರ, ಕೊಲೆ - ಸುಲಿಗೆಗೆ ಬಲಿಯಾಗುತ್ತಾ ಬಂದಿದ್ದಾರೆ. ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದಂತೆ ಶಿಕ್ಷಣವು ಹುಲಿಯ ಹಾಲುದ್ದಿಂತೆ ಅದನ್ನು ಕುಡಿದವರು ಘರ್ಜಿಸಲೇಬೇಕು ಎನ್ನುವಂತೆ ದಲಿತರ ಸರ್ವ ವಿಮೋಚನೆಗೆ ಶಿಕ್ಷಣವೇ ಅಸ್ತ್ರ  ಎಂದು ಸಾಮಾಜಿಕ ಚಿಂತಕರು ಹಾಗೂ ರಾಯಚೂರು ಆಕಾಶವಾಣಿ ಕೇಂದ್ರ ಕಾರ್ಯಕ್ರಮ ಪ್ರಸಾರ ನಿರ್ವಾಹಕರಾದ ವೆಂಕಟೇಶ ಬೇವಿನಬೆಂಚಿ ಅಭಿಮತ ವ್ಯಕ್ತಪಡಿಸಿದರು. ರಾಯಚೂರು ತಾಲೂಕಿನ ಮರ್ಚೆಡ್ ಗ್ರಾಮದ ಹನುಮಂತಿ ದಿ. ಕೋಳಿ ಹುಸೇನಪ್ಪ ಮ್ಯಾತ್ರಿ ಇವರ ಮನೆಯಲ್ಲಿ ಬಹುಜನ ಸಂಘರ್ಷ ಸಮಿತಿ ಹಾಗೂ ಜನತಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್(ರಿ) ಬಲ್ಲಟಗಿ ವತಿಯಿಂದ ಶನಿವಾರ ಆಯೋಜಿಸಿದ್ದ 127 ನೇ ಮನೆ ಮನೆಗೆ ಅಂಬೇಡ್ಕರ್ ಕಾರ್ಯಕ್ರಮದಲ್ಲಿ ಮುಖ್ಯಭಾಷಣಕಾರರಾಗಿ ಮಾತನಾಡಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಹೋರಾಟಗಾರ ರಾಘವೇಂದ್ರ ಭೋರೆಡ್ಡಿ ಮನ್ಸಾಲಪೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬಾಬಾಸಾಹೇಬ್ ಅಂಬೇಡ್ಕರ್ ವಿಚಾರಗಳನ್ನು ಮತ್ತು ಅವರ ಮಾರ್ಗ ಹಾಗೂ ಆಶಯಗಳನ್ನು ಮನೆ ಮನೆಗೆ ತಲುಪಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದರು.  ಖ್ಯಾತ ಬಹುಜನ ಚಿಂತಕರಾದ ಶ್ರೀನಿವಾಸ ಮರೆಡ್ಡಿ, ಉಪನ್ಯಾಸಕ ಎಸ್.ಪ್ಯಾಟೆಪ್ಪ, ರಾಯಚೂರಿನ ಕ...
Image
  ಜಿಲ್ಲೆಯಲ್ಲಿ ಕೊಲೆ ಪ್ರಕರಣ ಹೆಚ್ಚಳ; ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ವಿಫಲ-ಬಸವರಾಜ ಭಂಡಾರಿ.                                                                                            ಜಯ ಧ್ವಜ ನ್ಯೂಸ್, ರಾಯಚೂರು,ಆ.22-  ಜಿಲ್ಲೆಯಲ್ಲಿ ಕೊಲೆ ಪ್ರಕರಣ ಹೆಚ್ಚಳವಾಗಿದ್ದು  ನಿಯಂತ್ರಣ ಮಾಡುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಬಹುಜನ ಸಮಾಜ ಪಕ್ಷ ರಾಜ್ಯ ಕಾರ್ಯದರ್ಶಿ ಬಸವರಾಜ ಭಂಡಾರಿ ಆರೋಪಿಸಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಳೆದ ಒಂದು ತಿಂಗಳಲ್ಲಿ ಜಿಲ್ಲೆಯಲ್ಲಿ ಮೂವರು ದಲಿತರ ಕಗ್ಗೊಲೆಗಳಾಗಿವೆ ಅಪರಾಧಿಗಳಿಗೆ ಕಾನೂನು ಭಯವಿಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಾತಾವರಣವಿದೆ ಎಂದು ದೂರಿದರು. ಹಳ್ಳಿಗಳಲ್ಲಿ ಕಿರಾಣಿ ಅಂಗಡಿಗಳಲ್ಲಿ ಮದ್ಯ‌ ದೊರೆಯುತ್ತಿದೆ ಅಲ್ಲದೆ ಗಾಂಜಾ ಹಾವಳಿಯಿಂದ ಯುವಕರು ನಶೆಯಲ್ಲಿ ಉನ್ಮತ್ತ ರಾಗಿ ಕೊಲೆ ,ಅತ್ಯಾಚಾರದಂತ ಪ್ರಕರಣ ಹೆಚ್ಚಾಗಲು ಪ್ರೇರೇಪಣೆ ನೀಡುತ್ತಿವೆ‌ ಎಂದರು. ಕಾನೂನು ಬಾಹಿರವಾಗಿ ಮದ್ಯದಂಗಡಿಗಳು ತಲೆಯತ್ತುತ್ತಿದ್ದು ಸರ್ಕಾರ ಅ...
Image
  ಯುವತಿ ಕೊಲೆ ಪ್ರಕರಣ: ಕಠಿಣ ‌ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಧರ್ಮಸಿಂಗ್ ‌ಸೂಚನೆ ಜಯ‌ ಧ್ವಜ ನ್ಯೂಸ್ ,ರಾಯಚೂರು. ಆ. 21- ರಾಯಚೂರು ಜಿಲ್ಲೆಯ ‌ಸಿರವಾರ ಪೊಲೀಸ್ ಠಾಣೆ‌ ವ್ಯಾಪ್ತಿಯ ಹೊಕ್ರಾಣಿಯಲ್ಲಿ  ಅಶ್ವಿನಿ ಎಂಬ ಯುವತಿಯ ಕೊಲೆ‌ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಜಯ್ ಧರ್ಮ  ಸಿಂಗ್ ರವರು ತಿಳಿಸಿದ್ದಾರೆ. ಈ ದುರದೃಷ್ಟಕರ ಘಟನೆಯ ವಿಷಯ ತಿಳಿಯುತ್ತಿದಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆಗೆ ತಕ್ಷಣವೇ ದೂರವಾಣಿ ಮುಖಾಂತರ ಮಾತನಾಡಿ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದು. ಈಗಾಗಲೇ ಪ್ರಕರಣ ದಾಖಲಾಗಿದ್ದು ಮೂರು ಆರೋಪಿಗಳನ್ನು ಬಂದಿಸಲಾಗಿದ್ದು ತನಿಖೆ ಪ್ರಗತಿಯಲ್ಲಿದೆ. ಈ ಪ್ರಕರಣವು ಅತ್ಯಂತ ಅಮಾನವೀಯ ಘಟನೆಯಾಗಿದ್ದು. ಇದರಲ್ಲಿ ಯಾರೇ ತಪ್ಪು ಮಾಡಿದರು ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಂತ್ರಸ್ಥ ಯುವತಿಯ ಪಾಲಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಯುವತಿ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು. ಸರ್ಕಾರ ಸದಾ ಕಾಲ ಈ ಸಂಕಷ್ಟದಲ್ಲಿರುವವರ ಬೆಂಬಲಕ್ಕಿದೆ. ದುಷ್...
Image
    ರಾಯಚೂರಲ್ಲಿ   ರಾಜ್ಯಮಟ್ಟದ  ಪತ್ರಕರ್ತರ  ಸಮ್ಮೇಳನ ಯಶಸ್ವಿಗೆ ಸಂಪೂರ್ಣ ಸಹಕಾರ: ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಸಿಂಗ್ ಭರವಸೆ   ಜಯ ಧ್ವಜ ನ್ಯೂಸ್ ,ರಾಯಚೂರು,ಆ.21 - ಮಂಬರುವ ದಿನಗಳಲ್ಲಿ ರಾಯಚೂರಿನಲ್ಲಿ ನಡೆಯಲಿರುವ 41ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಯಶಸ್ವಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಧರ್ಮಸಿಂಗ್ ತಿಳಿಸಿದರು.        ಬೆಂಗಳೂರಿನಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದಲ್ಲಿ ಭೇಟಿಯಾದ ರಾಯಚೂರು ಜಿಲ್ಲೆಯ ಪತಕರ್ತರ ಜೊತೆ ಸಮ್ಮೇಳನ ಪೂರ್ವಭಾವಿಯಾಗಿ ಮಾತುಕತೆ ನಡೆಸಿದರು. ರಾಯಚೂರಿನಲ್ಲಿ ಸಮ್ಮೇಳನ ನಡೆಯುತ್ತಿರುವುದು ಬಹಳ ಖುಷಿಯ ವಿಚಾರ. ಸಮ್ಮೇಳನದ ಎಲ್ಲಾ ಸಿದ್ಧತೆಗಳನ್ನು ಶೀಘ್ರದಲ್ಲಿ ಆರಂಭಿಸುವ ಕುರಿತು ಸಭೆ ನಡೆಸಲಾಗುವುದು. ಸಮ್ಮೇಳನದ ಎಲ್ಲಾ ಕೆಲಸ ಕಾರ್ಯಗಳು ಅಚ್ಚುಕಟ್ಟಾಗಿ ನಿರ್ವಹಿಸೋಣ. ಎಲ್ಲರ ಸಹಕಾರದೊಂದಿಗೆ ಒಗ್ಗೂಡಿ  ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.   ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಕಳೆದ ಬಾರಿ ಬೀದರ್ ನಲ್ಲಿ ನಡೆದ 40ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ವಿಯಾಗಿದ್ದು, ರಾಯಚೂರಿನಲ್ಲಿ ಕೂಡ ಅದ್ದೂರಿಯಾಗಿ ಸಮ್ಮೇಳನ ನಡೆಸಬೇಕಿದೆ. ಸಮ್ಮೇಳನಕ್ಕೆ ಈಗಿನಿಂದಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂ...
Image
  ಜಿಲ್ಲೆಯಲ್ಲಿಯೇ ಏಮ್ಸ್ ಸ್ಥಾಪಿಸಲು ಸರ್ಕಾರಕ್ಕೆ ಒತ್ತಾಯಿಸಿದ ಎನ್ಎಸ್ ಬೋಸರಾಜು ಜಯ ಧ್ವಜ ನ್ಯೂಸ್ ,ರಾಯಚೂರು,ಆ.21- ಜಿಲ್ಲೆಯ ನೀರಾವರಿ, ತುಂಗಭದ್ರಾ ಜಲಾಶಯ ಪ್ರದೇಶದ ಸಮಸ್ಯೆಗಳು ಹಾಗೂ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌) ಸ್ಥಾಪನೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಅವರು ವಿಧಾನ ಪರಿಷತ್‌ನಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು. ತುಂಗಭದ್ರಾ ಜಲಾಶಯದ ಕೆಳಭಾಗದಲ್ಲಿ ಪ್ರವಾಹ ನಿಯಂತ್ರಣ ಹಾಗೂ ಕಾಲುವೆಗಳ ಸುರಕ್ಷತೆಗಾಗಿ ಕೈಗೊಂಡಿರುವ ಕ್ರಮಗಳ ಕುರಿತು ಬೋಸರಾಜು ಅವರು ಮಾಹಿತಿ ಕೋರಿದರು. ಇದಕ್ಕೆ ಉತ್ತರಿಸಿದ ಸರ್ಕಾರ, ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದೆ. ಕಾಲುವೆಗಳಲ್ಲಿನ ಹಳೆಯ ಹಾಗೂ ಹಾನಿಗೊಳಗಾದ ರಚನೆಗಳ ದುರಸ್ತಿ ಮತ್ತು ಬಲವರ್ಧನೆ ಸೇರಿದಂತೆ ಅಗತ್ಯ ಕಾಮಗಾರಿಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ಪರಿಶೀಲನೆ ಹಾಗೂ ಅನುಮೋದನಾ ಪ್ರಕ್ರಿಯೆ ನಡೆಯುತ್ತಿದೆ ಎಂದು ಸರ್ಕಾರ ತಿಳಿಸಿದೆ. ರಾಯಚೂರು ಜಿಲ್ಲೆಯ ನೀರಾವರಿ ಯೋಜನೆಗಳ ವೆಚ್ಚ ಹಾಗೂ ಯೋಜನೆಗಳ ಪ್ರಗತಿ ಕುರಿತೂ ಬೋಸರಾಜು ಅವರು ಪ್ರಶ್ನಿಸಿದರು. ವಿವಿಧ ಯೋಜನೆಗಳ ಕಾಮಗಾರಿಗಳ ಪ್ರಗತಿ ಹಾಗೂ ಅಂದಾಜು ವೆಚ್ಚದ ಕುರಿತು ಸರ್ಕಾರ ಸದನಕ್ಕೆ ಮಾಹಿತಿ ನೀಡಿದೆ. ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ಒತ್ತು ಇದೇ ವೇಳೆ ರಾಯಚೂರು ನಗರದಲ್ಲಿ ಅಖಿಲ ...
Image
  ಹೊಕ್ರಾಣಿ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ಥರಿಗೆ ಸಾಂತ್ವನ ಹೇಳಿದ ರವಿ ಬೋಸರಾಜು ಎನ್ಎಸ್ ಬೋಸರಾಜು,  ಹಂಪಯ್ಯ ನಾಯಕರಿಂದ ಸಂತ್ರಸ್ತ ಕುಟುಂಬಕ್ಕೆ ₹2 ಲಕ್ಷ ರೂ. ನೆರವು ಜಯ ಧ್ವಜ ನ್ಯೂಸ್ ,ರಾಯಚೂರು,ಆ.20- ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದಾರೆ ಎನ್ನಲಾದ ಯುವತಿಯ ಕುಟುಂಬಕ್ಕೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಮತ್ತು ಶಾಸಕ ಹಂಪಯ್ಯ ನಾಯಕ್ ಅವರ ಪರವಾಗಿ ಕಾಂಗ್ರೆಸ್ ರಾಜ್ಯ ಯುವ ಮುಖಂಡ ರವಿ ಬೋಸರಾಜು ಅವರು ₹2 ಲಕ್ಷ ಆರ್ಥಿಕ ನೆರವು ನೀಡಿದರು. ಬೆಂಗಳೂರಿನಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎನ್.ಎಸ್. ಬೋಸರಾಜು ಹಾಗೂ ಶಾಸಕ ಹಂಪಯ್ಯ ನಾಯಕ್ ಅವರು ಖುದ್ದಾಗಿ ಗ್ರಾಮಕ್ಕೆ ಬರಲು ಸಾಧ್ಯವಾಗದ ಕಾರಣ, ಪ್ರಕರಣ ಸುದ್ದಿ ತಿಳಿಯುತ್ತಿದ್ದಂತೆಯೇ ಅವರ ಪರವಾಗಿ ರವಿ ಬೋಸರಾಜು ಅವರು ಒಕ್ರಾಣಿ ಗ್ರಾಮಕ್ಕೆ ತೆರಳಿ ಸಂತ್ರಸ್ತ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಕುಟುಂಬದವರಿಗೆ ಸಾಂತ್ವನ ಹೇಳಿ ಮಾತನಾಡಿದರ ಅವರು, “ಅಶ್ವಿನಿ ಅವರ ಕುಟುಂಬದ ನೋವು ಮತ್ತು ದುಃಖವನ್ನು ಅರ್ಥಮಾಡಿಕೊಳ್ಳುವುದು ಕಷ್ಟ  ಆ ಭಗವಂತ ಅಶ್ವಿನಿ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ.“ಅಶ್ವಿನಿ ಸಾವಿಗೆ ನ್ಯಾಯ ದೊರಕಬೇಕು. ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಸಂತ್ರಸ...